ಬೆಂಗಳೂರು : ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ನೂತನ ಕಾರ್ಮಿಕ ಸಂಹಿತೆಗಳು ಹಾಗೂ ಕರ್ನಾಟಕದಲ್ಲಿ ಈಗಾಗಲೇ ಜಾರಿಯಲ್ಲಿರುವ ಕಾರ್ಮಿಕ ನಿಯಮಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚವರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ವಿಸ್ತೃತ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ರವಿ ಡಿ. ಚನ್ನಣ್ಣವರ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಕಾರ್ಮಿಕ ಕಲ್ಯಾಣ ಆಯುಕ್ತರಾದ ಶ್ರೀ ಆಂಜನೇಯ, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್..,
ಜಂಟಿ ನಿರ್ದೇಶಕರಾದ ನಂಜಪ್ಪ, ಉಪ ಕಾರ್ಮಿಕ ಆಯುಕ್ತರಾದ ಉಮೇಶ್, ಇಎಸ್ಐ ಆಯುಕ್ತರಾದ ದಿನೇಶ್ ಕುಮಾರ್, ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ಪ್ರೊ. ಬಾಬು ಮ್ಯಾಥ್ಯೂ, ಶ್ರೀ ಲಕ್ಷ್ಮಿ ವೆಂಕಟೇಶ್, ಶ್ರೀ ಲಕ್ಷ್ಮಯ್ಯ ಕಾಳಪ್ಪ, ಶ್ರೀ ಮೀನಾಕ್ಷಿ ಸುಂದರಂ, ಶ್ರೀ ಶಿವಶಂಕರ್ , ಶ್ರೀಮತಿ ಲೀಲಾವತಿ, ಉಪ ಕಾರ್ಮಿಕ ಆಯುಕ್ತರು , ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು ಪಾಲ್ಗೊಂಡಿದ್ದರು.
