0 Shares

ಬೀದರ್ : ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ.

ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್‌ ಕಳ್ಳತನ ಮಾಡಿತ್ತಿದ್ದಾರೆ. ಬೀದರ್​​ನ ಶಾಲೆಯಲ್ಲಿದ್ದ 6 ಸಿಲಿಂಡರ್​​ ಕಳತನ ಮಾಡಿರುವಂತಹ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ 6 ಸಿಲಿಂಡರ್​​ಗಳನ್ನ ಕಳ್ಳರು ಹೊತ್ತೊಯ್ದಿದ್ದಾರೆ.​ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಪೂರೈಸಿದ್ದ ಸಿಲಿಂಡರ್​ಗಳನ್ನ ಅಡುಗೆಕೋಣೆ ಬೀಗ ಮುರಿದು ಕಳ್ಳರು ಹೊತ್ತೊಯ್ದಿದ್ದಾರೆ. ಸದ್ಯ ಈ ಕುರಿತಾಗಿ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

0 Shares

By admin

Leave a Reply

Your email address will not be published. Required fields are marked *