0 Shares

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದ ಕಾಂಗ್ರೆಸ್ ಪಕ್ಷದ ಒಳಗೆ ಉಂಟಾಗುವ ಉಂಟಾಗಿರುವ ಗೊಂದಲಗಳ ಬಗ್ಗೆ ನಾನೇಕೆ ಉತ್ತರಿಸಲಿ. ಏನಿದು ಅವರ ಪಕ್ಷದ ಆಂತರಿಕ ವಿಚಾರ ಎಂದು ಈ ಬಗ್ಗೆ ಪ್ರಶ್ನೆಸಿದ ಮಾಧ್ಯಮಗಳಿಗೆ ಕೇಂದ್ರ ಸಚಿವರು ಉತ್ತರಿಸಿದರು.

ನಾನು ಈ ಬೆಳವಣಿಗೆಗಳನ್ನು ಮಾಧ್ಯಮಗಳಲ್ಲಿ ಗಮನಿಸಿದೆ ಸಮಸ್ಯೆ ಸರಿ ಮಾಡಿಕೊಳ್ಳುವುದು ಅಥವಾ ಬಿಡುವುದು ಆ ಪಕ್ಷಕ್ಕೆ ಬಿಟ್ಟದ್ದು. ಆದರೆ ಒಂದು ಸಮುದಾಯದ ಹಿನ್ನೆಲೆಯಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಈವರೆಗೂ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಸಚಿವ ಕುಮಾರಸ್ವಾಮಿ ಅವರು ನೇರವಾಗಿ ಉತ್ತರಿಸಿದರು.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

0 Shares

By admin

Leave a Reply

Your email address will not be published. Required fields are marked *