ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಧಾರ್ಮಿಕ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
2023ರಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ ಕೋರಿದ್ದಾಗ, ಶಿವಶಂಕರಪ್ಪ ಅವರು ಹಾಲಿ ಶಾಸಕರಾಗಿರುವುದರಿಂದ ಅವರಿಗೆ ಟಿಕೆಟ್ ನೀಡುವುದು ಅಗತ್ಯ ಎಂದು ಪಕ್ಷ ಹೇಳಿತ್ತು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ ಈಗ ವಂಚಿಸಲಾಗಿದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
